ಚಿತ್ರ: ಮುಂಗಾರು ಮಳೆ
ಹಾಡು: ಅನಿಸುತಿದೆ
ಸಂಗೀತ: ಮನೋ ಮೂರ್ತಿ
ಸಾಹಿತ್ಯ: ಜಯಂತ್ ಕಾಯ್ಕಣಿ
ಹಾಡಿದವರು: ಸೋನು ನಿಗಮ್
ವರ್ಷ: ೨೦೦೬
ಅನಿಸುತಿದೆ ಯಾಕೊ ಇಂದು..ನೀನೇನೆ ನನ್ನವಳಿದ್ದು
ಮಾಯದ ಲೋಕದಿಂದ..ನನಗಾಗೆ ಬಂದವಳಿದ್ದು
ಆಹಾ ಎಂಥ ಮಧುರ ಯಾತನೆ
ಕೊಲ್ಲು ಹುಡುಗಿ ಒಮ್ಮೆ ನನ್ನ..ಹಾಗೆ ಸುಮ್ಮನೆ
ಅನಿಸುತಿದೆ ಯಾಕೊ ಇಂದು..
---------------------೧-------------------------
ಸುರಿಯುವ ಸೋನೆಯು ಸೂಸಿದೆ..ನಿನ್ನದೆ ಪರಿಮಳ
ಇನ್ನು ಯಾರ ಕನಸಲೂ..ನೀನು ಹೋದರೆ ತಳಮಳ
ಪೂರ್ಣ ಚಂದಿರ ರಜ ಹಾಕಿದೆ..ನಿನ್ನಯ ಮೊಗವನು ಕಂಡ ಕ್ಷಣ
ನಾ ಖೈದಿ ನೀನೆ ಸೆರೆಮನೆ
ತಪ್ಪಿ ನನ್ನ ಅಪ್ಪಿಕೊ ಒಮ್ಮೆ..ಹಾಗೆ ಸುಮ್ಮನೆ
ಅನಿಸುತಿದೆ ಯಾಕೊ ಇಂದು..
---------------------೨------------------------
ತುಟಿಗಳ ಹೂವಲಿ..ಆಡದ ಮಾತಿನ ಸಿಹಿಯಿದೆ
ಮನಸಿನ ಪುಟದಲಿ..ಕೇವಲ ನಿನ್ನದೆ ಸಹಿಯಿದೆ
ಹಣೆಯಲಿ ಬರೆಯದ ನಿನ್ನ ಹೆಸರ..ಹೃದಯದಿ ನಾನೆ ಕೊರೆದಿರುವೆ
ನಿನಗುಂಟೆ ಇದರ ಕಲ್ಪನೆ
ನನ್ನ ಹೆಸರ ಕೂಗೆ ಒಮ್ಮೆ..ಹಾಗೆ ಸುಮ್ಮನೆ
ಅನಿಸುತಿದೆ ಯಾಕೊ ಇಂದು..ನೀನೇನೆ ನನ್ನವಳಿದ್ದು
ಮಾಯದ ಲೋಕದಿಂದ..ಬಂದವಳಿದ್ದು
ಆಹ ಎಂಥ ಮಧುರ ಯಾತನೆ
ಕೊಲ್ಲು ಹುಡುಗಿ ಒಮ್ಮೆ ನನ್ನ ಹಾಗೆ ಸುಮ್ಮನೆ
ಅನಿಸುತಿದೆ ಯಾಕೊ ಇಂದು..
ಚಿತ್ರ: ಮುಂಗಾರು ಮಳೆ
ಹಾಡು: ಅನಿಸುತಿದೆ
ಸಂಗೀತ: ಮನೋ ಮೂರ್ತಿ
ಸಾಹಿತ್ಯ: ಜಯಂತ್ ಕಾಯ್ಕಣಿ
ಹಾಡಿದವರು: ಸೋನು ನಿಗಮ್
ವರ್ಷ: ೨೦೦೬
ಅನಿಸುತಿದೆ ಯಾಕೊ ಇಂದು..ನೀನೇನೆ ನನ್ನವಳಿದ್ದು
ಮಾಯದ ಲೋಕದಿಂದ..ನನಗಾಗೆ ಬಂದವಳಿದ್ದು
ಆಹಾ ಎಂಥ ಮಧುರ ಯಾತನೆ
ಕೊಲ್ಲು ಹುಡುಗಿ ಒಮ್ಮೆ ನನ್ನ..ಹಾಗೆ ಸುಮ್ಮನೆ
ಅನಿಸುತಿದೆ ಯಾಕೊ ಇಂದು..
---------------------೧-------------------------
ಸುರಿಯುವ ಸೋನೆಯು ಸೂಸಿದೆ..ನಿನ್ನದೆ ಪರಿಮಳ
ಇನ್ನು ಯಾರ ಕನಸಲೂ..ನೀನು ಹೋದರೆ ತಳಮಳ
ಪೂರ್ಣ ಚಂದಿರ ರಜ ಹಾಕಿದೆ..ನಿನ್ನಯ ಮೊಗವನು ಕಂಡ ಕ್ಷಣ
ನಾ ಖೈದಿ ನೀನೆ ಸೆರೆಮನೆ
ತಪ್ಪಿ ನನ್ನ ಅಪ್ಪಿಕೊ ಒಮ್ಮೆ..ಹಾಗೆ ಸುಮ್ಮನೆ
ಅನಿಸುತಿದೆ ಯಾಕೊ ಇಂದು..
---------------------೨------------------------
ತುಟಿಗಳ ಹೂವಲಿ..ಆಡದ ಮಾತಿನ ಸಿಹಿಯಿದೆ
ಮನಸಿನ ಪುಟದಲಿ..ಕೇವಲ ನಿನ್ನದೆ ಸಹಿಯಿದೆ
ಹಣೆಯಲಿ ಬರೆಯದ ನಿನ್ನ ಹೆಸರ..ಹೃದಯದಿ ನಾನೆ ಕೊರೆದಿರುವೆ
ನಿನಗುಂಟೆ ಇದರ ಕಲ್ಪನೆ
ನನ್ನ ಹೆಸರ ಕೂಗೆ ಒಮ್ಮೆ..ಹಾಗೆ ಸುಮ್ಮನೆ
ಅನಿಸುತಿದೆ ಯಾಕೊ ಇಂದು..ನೀನೇನೆ ನನ್ನವಳಿದ್ದು
ಮಾಯದ ಲೋಕದಿಂದ..ಬಂದವಳಿದ್ದು
ಆಹ ಎಂಥ ಮಧುರ ಯಾತನೆ
ಕೊಲ್ಲು ಹುಡುಗಿ ಒಮ್ಮೆ ನನ್ನ ಹಾಗೆ ಸುಮ್ಮನೆ
ಅನಿಸುತಿದೆ ಯಾಕೊ ಇಂದು..
0 comments:
Post a Comment